ನೀರಿನ ಮೂಲ ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ

ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಾಟೀಲ್ ಸೂಚನೆ

74

Get real time updates directly on you device, subscribe now.


ತುಮಕೂರು: ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿರುವ ಬಗ್ಗೆ ದೂರು ಬಂದಲ್ಲಿ ತಕ್ಷಣ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ತ್ಯಾಜ್ಯ ಅಥವಾ ರಾಸಾಯನಿಕಗಳು ಶುದ್ಧ ನೀರಿನ ಮೂಲಗಳಿಗೆ ಸೇರದಂತೆ ತಡೆಯುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗಿನ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿ, ಡೆಂಗ್ಯೂ ಪ್ರಕರಣ ಹೆಚ್ಚಳಗೊಳ್ಳದಂತೆ ಫಾಗಿಂಗ್, ಮನೆ ಸುತ್ತ ಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳುವಿಕೆ ಮುಂತಾದವುಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವಿಕೆ ಸೇರಿದಂತೆ ಅಗತ್ಯ ಮುನ್ನಚ್ಚಕೆ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಯಾವುದೇ ಸಕ್ರೀಯ ಕೋವಿಡ್ ಪ್ರಕರಣ ಇಲ್ಲದಿದ್ದರೂ ಸಹ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ನೀಡುವಿಕೆಗೆ ಆದ್ಯತೆ ನೀಡಬೇಕು. ಜಿಲ್ಲೆಗೆ 14 ಸಾವಿರ ಕೋವಿಶೀಲ್ಡ್ ಲಸಿಕೆ ಬರಲಿದ್ದು, ಈಗಾಗಲೇ 41 ಸಾವಿರದಷ್ಟು ದಾಸ್ತಾನು ಇರುವಂತಹ ಕೋವ್ಯಾಕ್ಸಿನ್ ಲಸಿಕೆಗಳನ್ನು ಅರ್ಹರಿಗೆ ನೀಡಬೇಕು ಮತ್ತು ತಾಲ್ಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಲಸಿಕೆಗಳ ದಾಸ್ತಾನು ಪಡೆಯಬೇಕು ಎಂದು ಸೂಚಿಸಿದರು.

ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ದಿವಸ ಎಂದು ಪರಿಗಣಿಸಲಾಗಿದ್ದು, ಸರ್ಕಾರಿ ಕಚೇರಿ ಮುಖ್ಯಸ್ಥರು ತಮ್ಮ ಕಚೇರಿ ಆವರಣ ಸ್ವಚ್ಛವಾಗಿಟ್ಟು ಕೊಳ್ಳುವಂತೆ ಕರೆ ನೀಡಿದರು. ಆಭಾ ಕಾರ್ಡ್ ಪ್ರಗತಿ ಅಶಾದಾಯಕವಾಗಿರುವುದಿಲ್ಲ ಮತ್ತು ಯುಡಿಐಡಿ ಕಾರ್ಡ್ ಜನರೇಟಿಂಗ್ ಕಾರ್ಯ ಬಾಕಿಯಿದೆ. ಎಲ್ಲರೂ ಈ ನಿಟ್ಟಿನಲ್ಲಿ ಲಕ್ಷ್ಯ ಕೊಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಹೆಲಿಪ್ಯಾಡ್ಗೆ ಜಾಗ ಗುರುತಿಸುವಿಕೆ: ಮಧುಗಿರಿ, ತಿಪಟೂರು, ಶಿರಾ, ಗುಬ್ಬಿ ಸೇರಿದಂತೆ ಉಪ ವಿಭಾಗೀಯ ಮಟ್ಟದಲ್ಲಿ ಮತ್ತು ತಾಲ್ಲೂಕು ಮಟ್ಟದಲ್ಲಿ ಪಟ್ಟಣಗಳಿಗೆ ಸಮೀಪವಿರುವಂತೆ 1-2 ಎಕರೆ ಜಮೀನನ್ನು ಹೆಲಿಪ್ಯಾಡ್ ನಿರ್ಮಾಣ ಸಂಬಂಧ ಗುರುತಿಸಿ ಪ್ರಸ್ತಾವನೆ ಸಲ್ಲಿಸುವಂತೆ ತಹಶೀಲ್ದಾರ್ಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸ್ಮಶಾನ ಭೂಮಿ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಆರ್ಟಿಸಿ ಪ್ರಕಾರವೇ ಜಮೀನು ಲಭ್ಯವಿದ್ದಲ್ಲಿ ಸ್ಕೆಚ್ ಮಾಡಿ ಭೂಮಿ ಹಸ್ತಾಂತರಕ್ಕೆ ಕ್ರಮವಹಿಸುವುದು. ಆರ್ಟಿಸಿಗಿಂತ ವ್ಯತ್ಯಾಸವಿರುವ ಜಮೀನು ಇದ್ದಲ್ಲಿ ಸ್ಕೆಚ್ಗೆ ಮರು ಪ್ರಸ್ತಾವನೆ ಸಲ್ಲಿಸುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದಂತಹ ಅರ್ಜಿಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ್ದಲ್ಲಿ ನಿಗದಿತ ಸಮಯದೊಳಗೆ ಇತ್ಯರ್ಥಗೊಳಿಸಬೇಕು ಮತ್ತು ಇತರೆ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳಾದಲ್ಲಿ ಆ ಇಲಾಖೆಗೆ ವರ್ಗಾಯಿಸಿ ಸೂಕ್ತ ಹಿಂಬರಹ ನೀಡಬೇಕು ಎಂದು ತಹಶೀಲ್ದಾರ್ಗಳಿಗೆ ತಿಳಿಸಿದರು.

ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಂಬಂಧಿಸಿದಂತೆ ನಿವೇಶನ ಹಸ್ತಾಂತರ ಪ್ರಕ್ರಿಯೆ ಮಾರ್ಚ್ 31 ರೊಳಗಾಗಿ ಗುರಿ ಮುಟ್ಟಬೇಕಿದ್ದು ಎಲ್ಲಾ ಇಓ, ಪಿಡಿಓ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಮತ್ತು ಮಳೆ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ 810 ಮನೆಗಳ ಪೈಕಿ 279 ಮನೆ ತಳಪಾಯ ಹಂತದಲ್ಲಿದ್ದು, ಲಿಂಟಲ್ ಹಂತದವೆಗೂ ತರಬೇಕು ಮತ್ತು 44 ಮನೆಗಳು ಚಾವಣಿ ಹಂತದವರೆಗೂ ತರಬೇಕು ಮತ್ತು ಈಗಾಗಲೇ ಪರಿಹಾರವಾಗಿ 1 ಲಕ್ಷ ಪಡೆದಿರುವ ಸಂತ್ರಸ್ತರು ಇನ್ನೂ ಮನೆ ನಿರ್ಮಾಣ ಮಾಡದಿದ್ದಲ್ಲಿ ಅವರಿಗೆ ನೋಟೀಸ್ ನೀಡಿ ಮನೆ ಕಟ್ಟಲು ಪ್ರಾರಂಭಿಸುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ವಿದ್ಯಾಕುಮಾರಿ ಅವರು ಪಿಡಿಓಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳು ಮತಗಟ್ಟೆ ವೀಕ್ಷಿಸಲಿದ್ದು, ಈ ಸಂಬಂಧ ರೂಟ್ ಮ್ಯಾಪ್ ಸಿದ್ಧಮಾಡಿಟ್ಟುಕೊಳ್ಳುವಂತೆ ಮತ್ತು ಕಳೆದ ಎಂಪಿ ಚುನಾವಣೆಯಲ್ಲಿ ಗಮನಿಸಿದಂತೆ ಕ್ರಿಟಿಕಲ್ ಮತ್ತು ವರ್ನಬಲ್ ಮತಗಟ್ಟೆಗಳ ಪಟ್ಟಿ ಮಾಡಿ ಸಲ್ಲಿಸುವಂತೆ ಮತ್ತು ಜ.25ರ ರಾಷ್ಟ್ರೀಯ ಮತದಾರರ ದಿನಾಚರಣೆ ವ್ಯವಸ್ಥಿತವಾಗಿ ಆಚರಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರು ಎಇಆರ್ ಓ, ಇಅರ್ ಓಗಳಿಗೆ ಸೂಚಿಸಿದರು.

Get real time updates directly on you device, subscribe now.

Comments are closed.

error: Content is protected !!